show blocks helper
  • Samyuktha Karnataka is a major Kannada language daily newspaper in the state of Karnataka. Founded in 1921 by Loka Shikshana Trust over strong morals, to promote patriotism and nationalistic ideas, and the need to report the truth, the newspaper is headquartered in Hubli. Loka Shikshana Trust was founded by senior freedom fighters of India around 80 years ago, during the turbulent national movement. Its editor is Hunasawadi Rajan and it is printed and published by Ashok Shanbag. The newspaper is a daily publication available in the broadsheet format. It gives news, views and commentary from the state and across the country. It covers national and international news, developments in business and economics, sports and feature articles among other newsworthy topics. Parallel editions are published in Bangalore, Mangalore, Davanagere and Kalaburagi, making it a popular daily in the state of Karnataka. Samyuktha Karnataka also has an e-paper edition, which caters to the Kannada readers, across the world. Although it is the oldest daily in Karnataka, it has also been keeping pace with the rapid technological advancements. It has gained widespread readership across the state over the years, owing to its strong principles, reporting genuinely and precisely.
  • Mayura E zine is a Kannada Monthly Magazine, published in Bangalore since 1968, Mayura E zine, it is published by The Printers (Mysore) Pvt. Ltd. It covers Short Stories, Children Stories, Comedy write up, Film review, Essay, Jokes, Film or Drama actors interview, Kannada authors interview, From 1975 issue's selected stories published in the name of 'Navilugari' and astrology.
  • Sudha is a Kannada weekly magazine published in Bangalore since 1965. Sudha Magazine, it is published by The Printers (Mysore) Pvt. Ltd. It covers women interested topics, serials, stories, children articles, cine news, politics, beauty tips, analyzing problems of women, interest topics, health related articles and celebrity interviews.
  • Aragini Film Weekly e-magazine in Kannada by Eesanje.
  • ಶಬ್ದ ಪ್ರಸಾರವಾಗಲು ಒಂದು ಮಾಧ್ಯಮದ ಅವಶ್ಯಕತೆಯಿದೆ ಶಬ್ದವು ನೀಳತರಂಗವಾಗಿ ಪ್ರಸಾರವಾಗುತ್ತದೆ ಮತ್ತು ಪ್ರಸಾರವಾಗಲು ಮಾಧ್ಯಮದ ಅವಶ್ಯಕತೆಯಿದೆ. ಶಬ್ದವು ಯಾವಾಗಲೂ ಒಂದು ಕಂಪಿಸುವ ವಸ್ತುವಿನಿಂದ ಉಂಟಾಗುತ್ತದೆ. ಶೃತಿಕವೆ, ಡೋಲು, ಘಂಟೆಗಳು, ವೀಣೆಯ ತಂತಿಗಳು ಇತ್ಯಾದಿಗಳಿಂದ ಈ ಕಂಪನಗಳು ಉಂಟಾಗುತ್ತವೆ. ಮಾನವನಲ್ಲಿ ಧ್ವನಿಯು ಧ್ವನಿತಂತುಗಳ ಕಂಪನದಿಂದ ಉಂಟಾಗುತ್ತದೆ ಮತ್ತು ಸಂಗೀತ ವಾದ್ಯಗಳಿಂದ ಶಬ್ದವು ವಾದ್ಯಗಳಲ್ಲಿ ತುಂಬಿರುವ ಗಾಳಿಯ ಕಂಪನದಿಂದ ಉಂಟಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಶಬ್ದ ಉತ್ಪತ್ತಿ ಮಾಡುವ ವಸ್ತುವಿನ ಕಂಪನಗಳು ಎಷ್ಟು ಕಡಿಮೆ ಅಥವ ಹೆಚ್ಚಾಗಿರುತ್ತವೆಂದರೆ ಮಾನವನ ಕಿವಿಗಳು ಅದನ್ನು ಗ್ರಹಿಸಲಾರವು. ಮಾನವನ ಶ್ರವಣ ಶ್ರೇಣಿಯ ಆವೃತ್ತಿಯು 20 ಹಟ್ರ್ಜ್ ನಿಂದ 20000 ಹಟ್ರ್ಜ್ ವರೆಗೆ ವ್ಯಾಪಿಸಿದೆ. 20 ಹಟ್ರ್ಜ್‍ಗಿಂತ ಕಡಿಮೆ ಆವೃತ್ತಿಯ ಶಬ್ದವನ್ನು ಅವಧ್ವನಿ ಎಂದೂ, 20000 ಹಟ್ರ್ಜ್‍ಗಿಂತ ಹೆಚ್ಚಿನ ಆವೃತ್ತಿಯುಳ್ಳ ಶಬ್ದವನ್ನು ಶ್ರವಣಾತೀತ ಧ್ವನಿ ಎಂದು ಕರೆಯುತ್ತಾರೆ. ಘಂಟಾಪಾತ್ರೆಯ ಪ್ರಯೋಗವು ಶಬ್ದ ಪ್ರಸಾರಕ್ಕೆ ಮಾಧ್ಯಮ ಅವಶ್ಯಕ ಎಂದು ರುಜುವಾತುಪಡಿಸಲು ಮಾಡುವ ಸಾಮಾನ್ಯ ಪ್ರಯೋಗವಾಗಿದೆ.
  • ನ್ಯೂಟನ್ನಿನ ಎರಡನೇ ನಿಯಮದ ಪ್ರಕಾರ, ಒಂದು ಕಾಯಕ್ಕೆ ಅದರ ಮೇಲಿನ ಬಲ ಪ್ರಯೋಗದಿಂದ ನೀಡಿದ ವೇಗೋತ್ಕರ್ಷವು ಕಾಯದ ಮೇಲೆ ಪ್ರಯೋಗವಾದ ಬಲಕ್ಕೆ ನೇರ ಅನುಪಾತದಲ್ಲಿಯೂ ಮತ್ತು ಬಲ ಪ್ರಯೋಗವಾದ ದಿಕ್ಕಿನಲ್ಲಿಯು ಕಾಯದ ರಾಶಿಗೆ ವಿಲೋಮಾನುಪಾತದಲ್ಲಿಯೂ ಇರುತ್ತದೆ. ನ್ಯೂಟನ್ನಿನ ಎರಡನೇ ನಿಯಮವು ಬಲ ಮತ್ತು ವೇಗೋತ್ಕರ್ಷಗಳ ನಡುವಿನ ಸಂಬಂಧವನ್ನು ನಿಖರವಾಗಿ ವಿವರಿಸುತ್ತದೆ.
  • ನ್ಯೂಟನ್ನನ ಮೂರನೇ ನಿಯಮದ ಪ್ರಕಾರ, ಕ್ರಿಯೆ ಮತ್ತು ಪ್ರತಿಕ್ರಿಯೆಗಳು ಪರಸ್ಪರ ಸಮ ಮತ್ತು ವಿರುದ್ಧವಾಗಿರುತ್ತವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಕ್ರಿಯೆ ಮತ್ತು ಪ್ರತಿಕ್ರಿಯೆಗಳು ಬೇರೆ ಬೇರೆ ವಸ್ತುಗಳ ಮೇಲೆ ಪ್ರಯೋಗವಾಗುತ್ತವೆ. ಒಂದು ವಸ್ತುವು ಮತ್ತೊಂದರ ಮೇಲೆ ಬಲ ಪ್ರಯೋಗಿಸಿದರೆ ತಕ್ಷಣವೇ ಮತ್ತೊಂದು ವಸ್ತುವು ಪ್ರತಕ್ರಿಯೆಯಾಗಿ ಮೊದಲನೇ ವಸ್ತುವಿನ ಮೇಲೆ ಅಷ್ಟೇ ಪ್ರಮಾಣದ ಬಲವನ್ನು ಪ್ರಯೋಗಿಸುತ್ತದೆ. ಈ ಎರಡೂ ಬಲಗಳು ಸಮವಾಗಿದ್ದರೂ ಪರಸ್ಪರ ವಿರುದ್ಧ ದಿಕ್ಕಿನಲ್ಲಿರುತ್ತವೆ. ಎರಡೂ ಬಲಗಳು ವಿಭಿನ್ನ ವಸ್ತುಗಳ ಮೇಲೆ ಪ್ರಯೋಗವಾಗುವುದರಿಂದ ಅವುಗಳು ತಟಸ್ಥವಾಗುವುದಿಲ್ಲ. ಆದ್ದರಿಂದ ನ್ಯೂಟನ್ನನ ಮೂರನೇ ನಿಯಮವು ಎರಡು ವಿಭಿನ್ನ ವಸ್ತುಗಳ ನಡುವಿನ ಬಲಗಳ ನಡುವಣ ನಡೆಯುವ ಪರಸ್ಪರ ಕ್ರಿಯೆಯನ್ನು ವಿವರಿಸುತ್ತದೆ.
  • ಒಂದು ಕಬ್ಬಿಣದ ಆಯತಘನವು ಮರಳಿನ ಮೇಲೆ ಉಂಟುಮಾಡುವ ಒತ್ತಡವನ್ನು ಅಧ್ಯಯನ ಹಾಗೂ ಹೋಲಿಕೆ ಮಾಡಲು ಅದರ ದ್ರವ್ಯರಾಶಿ ಮತ್ತು ತೂಕವನ್ನು ಕಂಡುಹಿಡಿಯಬೇಕು. ನೀವು ಒಂದು ವಸ್ತುವಿನ ದ್ರವ್ಯರಾಶಿಯನ್ನು ವ್ಯಾಖ್ಯಾನಿಸಬಲ್ಲರೇ ? ಒಂದು ವಸ್ತುವಿನ ದ್ರವ್ಯರಾಶಿಯು ಆ ವಸ್ತುವಿನ ಮೂಲಭೂತ ಗುಣವಾಗಿದೆ. ಆ ವಸ್ತುವಿನ ಜಡತ್ವವನ್ನು ಅಳತೆ ಮಾಡುವ ಅಂಕಿಯಾಗಿದೆ. ಆ ವಸ್ತುವಿನಲ್ಲಿರುವ ಒಟ್ಟು ದ್ರವ್ಯದ ಮೂಲಭೂತ ಅಳತೆಯಾಗಿದೆ. ದ್ರವ್ಯರಾಶಿಯ ಸಾಮಾನ್ಯ ಸಂಕೇತ ‘m’ ಮತ್ತು ಅದರ ಅಂತರಾಷ್ಟ್ರೀಯ ಏಕಮಾನ ಕಿಲೋಗ್ರಾಂಗಳು. ಪ್ರತಿನಿತ್ಯದ ಬಳಕೆಯಲ್ಲಿ ದ್ರವ್ಯರಾಶಿಯನ್ನು ತೂಕವೆಂದೂ, ಅವುಗಳ ಏಕಮಾನಗಳನ್ನು ಕಿಲೊಗ್ರಾಂಗಳೆಂದು ಪರಿಗಣಿಸುತ್ತೇವೆ. ವೈಜ್ಞಾನಿಕವಾಗಿ ತೂಕವನ್ನು ಯಾವುದೇ ವಸ್ತುವಿನಮೇಲೆ ವರ್ತಿಸುತ್ತಿರುವ ಗುರುತ್ವಾಕರ್ಷಣಾಬಲ ಎಂದು ವ್ಯಾಖ್ಯಾನಿಸಬಹುದು. ಆದರೆ ದ್ರವ್ಯರಾಶಿಯು ವಸ್ತುವಿನ ಸಹಜ ಗುಣವಾಗಿರುತ್ತದೆ.
  • ಈ ಕೆಳಕಂಡ ದ್ರಾವಣಗಳಲ್ಲಿ ಒಂದು ಘನ ವಸ್ತುವನ್ನು ಸಂಪೂರ್ಣವಾಗಿ ಮುಳುಗಿಸಿದಾಗ ಘನವು ಕಳೆದುಕೊಳ್ಳುವ ತೂಕಕ್ಕೂ ಮತ್ತು ಪಲ್ಲಟವಾಗುವ ನೀರಿನ ತೂಕಕ್ಕೂ ಇರುವ ಸಂಬಂಧವನ್ನು ಸ್ಥಾಪಿಸುವುದು.
    • ನಲ್ಲಿ ನೀರು
    • ಪ್ರಬಲ ಉಪ್ಪಿನ ದ್ರಾವಣ
    ಕನಿಷ್ಠ ಎರಡು ಘನ ವಸ್ತುಗಳನ್ನು ಬಳಸಿ ಇದನ್ನು ಸಾಧಿಸಬಹುದು.
  • ಪ್ರತಿಫಲನ ಎಂದರೇನು? ಒಂದು ಮಾಧ್ಯಮದಲ್ಲಿ ವಸ್ತುವಿನ ಮೇಲೆ ಬಿದ್ದ ತರಂಗವು ಹಿಂತಿರುಗಿ ಅದೇ ಮಾಧ್ಯಮಕ್ಕೆ ಬರುವ ಕ್ರಿಯೆಯನ್ನು ಪ್ರತಿಫಲನ ಎನ್ನುತ್ತೇವೆ. ಉದಾಹರಣೆಗೆ ಬೆಳಕಿನ ಪ್ರತಿಫಲನ, ಶಬ್ದದ ಪ್ರತಿಫಲನ ಮತ್ತು ನೀರಿನ ತರಂಗಗಳ ಪ್ರತಿಫಲನ ನಿಮಗೆ ಗೊತ್ತೆ ಶಬ್ದ ತನ್ನ ಆಕರದಿಂದ ಹೇಗೆ ಪ್ರಸರಣೆಯಾಗುತ್ತದೆ ಎಂದು? ಶಬ್ದವು ಗಾಳಿಯಲ್ಲಿ ನೀಳತರಂಗಗಳಾಗಿ ಪ್ರಸರಣೆಯಾಗುತ್ತದೆ. ಗಾಳಿಯ ಗುಣಲಕ್ಷಣಗಳ ಮೂಲಕ ಶಬ್ದದ ಜವವನ್ನು ಕಂಡುಹಿಡಿಯಬಹುದು ಹೊರತಾಗಿ ಶಬ್ದದ ಆವೃತ್ತಿ ಅಥವಾ ಕಂಪನ ವಿಸ್ತಾರದಿಂದಲ್ಲ. ಒಂದು ಮೇಲ್ಮೈಗೆ ತಾಗಿದ ಶಬ್ದತರಂಗವು ಹೀರದೆ ಅಥವಾ ಚಲಿಸದೆ ಇದ್ದರೆ ಅದು ಪ್ರತಿಫಲನ ಹೊಂದುತ್ತದೆ. ಶಬ್ದ ಪ್ರತಿಫಲನದ ನಿಯಮವು ಬೆಳಕಿನ ಪ್ರತಿಫಲನ ನಿಯಮದ ರೀತಿಯೇ ಇದೆ, ಅಂದರೆ ಫಲಿತ ಕೋನದ ಅಳತೆಯು ಪ್ರತಿಫಲನ ಕೋನದ ಅಳತೆಗೆ ಸಮವಿರುತ್ತದೆ. ದರ್ಪಣದಲ್ಲಿ ಹೇಗೆ ಪಾರ್ಶ್ವಪಲ್ಲಟ ಕ್ರಿಯೆ ನಡೆಯುತ್ತದೆಯೋ ಹಾಗೆ. ಹೇಗೆ ಶಬ್ದ ಪ್ರತಿಫಲನವನ್ನು ವಿವರಿಸಬಹುದು? ಮಾಧ್ಯಮದಲ್ಲಿ ಚಲಿಸುತ್ತಿರುವ ಶಬ್ದ ತರಂಗಗಳು, ಮೇಲ್ಮೈಗೆ ತಾಗಿ ಮತ್ತು ಅದೇ ಮಾಧ್ಯಮದಿಂದ ಹಿಂತಿರುಗಿ ಬರುವ ಕ್ರಿಯೆಗೆ ಶಬ್ದತರಂಗದ ಪ್ರತಿಫಲನ ಎನ್ನುತ್ತೇವೆ. ಆ ತರಂಗಗಳನ್ನು ಆಪಾತ ಮತ್ತು ಪ್ರತಿಫಲಿತ ಶಬ್ದ ತರಂಗಗಳು ಎನ್ನುತ್ತೇವೆ. ಆಪಾತ ಮತ್ತು ಪ್ರತಿಫಲಿತ ಶಬ್ದ ತರಂಗಗಳು ಎಂದರೇನು? ಪ್ರತಿಫಲಕದ ಕಡೆಗೆ ಚಲಿಸುವ ಶಬ್ದ ತರಂಗಗಳನ್ನು ಆಪಾತ/ಪತನ ಶಬ್ದ ತರಂಗಗಳು ಎನ್ನುವರು. ಪ್ರತಿಫಲಕದಿಂದ ಹಿಂದಿರುವ ಶಬ್ದ ತರಂಗಗಳನ್ನು ಪ್ರತಿಫಲಿತ ಶಬ್ದ ತರಂಗಗಳು ಎನ್ನುವರು. ಪ್ರಾಯೋಗಿಕವಾಗಿ ಆಪಾತ ಬಿಂದು ಮತ್ತು ಪ್ರತಿಫಲಿತ ಬಿಂದು ಪ್ರತಿಫಲನ ಮೇಲ್ಮೈ ಮೇಲೆ ಒಂದೇ ಆಗಿರುತ್ತದೆ. ಪತನ ಬಿಂದುವಿನಲ್ಲಿ ಎಳೆದ ಲಂಬವನ್ನು ಲಂಬ ಎನ್ನುವರು.ಶಬ್ದ ತರಂಗವು ಲಂಬದಲ್ಲಿ ಉಂಟುಮಾಡಿದ ಕೋನವನ್ನು ಆಪಾತ ಕೋನ ಎನ್ನುವರು. “i” ಲಂಬದಿಂದ ಪ್ರತಿಫಲನಗೊಂಡ ಶಬ್ದತರಂಗದ ಕೋನವನ್ನು ಪ್ರತಿಫಲನ ಕೋನ “r” ಎನ್ನುವರು. ಫ್ರತಿಫಲನದ ನಿಯಮಗಳು ಪತನ ತರಂಗ, ಪ್ರತಿಫಲನ ತರಂಗ ಮತ್ತು ಪತನ ಬಿಂದುವಿನಲ್ಲಿ ಪ್ರತಿಫಲನ ಮೇಲ್ಮೈಗೆ ಎಳೆದ ಲಂಬ, ಈ ಮೂರು ಒಂದೇ ಸಮತಲದಲ್ಲಿರುತ್ತವೆ. ಪತನ ಕೋನವು ∠i ಪ್ರತಿಫಲನ ಕೋನಕ್ಕೆ∠r ಸಮವಾಗಿರುತ್ತದೆ. ಕಲಿವಿನ ಫಲಗಳು : ವಿದ್ಯಾರ್ಥಿಗಳು ಶಬ್ದ ತರಂಗದ ಮೊದಲನೆ ಮತ್ತು ಎರಡನೆ ಪ್ರತಿಫಲನದ ನಿಯಮಗಳನ್ನು ತಿಳಿಯುತ್ತಾರೆ. ಪ್ರತಿಫಲನದ ಮೊದಲನೆಯ ನಿಯಮ : ಪತನ ತರಂಗ, ಪ್ರತಿಫಲನ ತರಂಗ ಮತ್ತು ಪತನ ಬಿಂದುವಿನಲ್ಲಿ ಪ್ರತಿಫಲನ ಮೇಲ್ಮೈಗೆ ಎಳೆದ ಲಂಬ, ಈ ಮೂರು ಒಂದೇ ಸಮತಲದಲ್ಲಿರುತ್ತವೆ. ಪ್ರತಿಫಲನದ ಎರಡನೆಯ : ನಿಯಮ ಪತನ ಕೋನವು ∠i ಪ್ರತಿಫಲನ ಕೋನಕ್ಕೆ∠r ಸಮವಾಗಿರುತ್ತದೆ.
  • ಸ್ಪಿಂಗ್ ತ್ರಾಸು ಮತ್ತು ಅಳತೆಯ ಜಾಡಿಯನ್ನು ಉಪಯೋಗಿಸಿ ನೀರಿಗಿಂತ ಹೆಚ್ಚಿನ ಸಾಂದ್ರತೆ ಇರುವ ಘನವಸ್ತುವಿನ ಸಾಂದ್ರತೆಯನ್ನು ಕಂಡು ಹಿಡಿಯುವುದು.
  • ಸ್ಲಿಂಕಿ ( ಹಿಗ್ಗಿಸಿದ ಸ್ಪ್ರಿಂಗ್ ) ನಲ್ಲಿ ಒಂದು ಕಂಪನದ ವೇಗವನ್ನು ಕಂಡುಹಿಡಿಯುವುದು.
  • ಸರಣಿ ವಿದ್ಯುತ್  ಮಂಡಲಗಳೆಂದರೇನು ? ಎಂದು ತಿಳಿಯುವ ಮೊದಲು , ವಿದ್ಯುತ್ ಮಂಡಲಗಳೆಂದರೇನು? ಮತ್ತು ಅವುಗಳ ವಿಧಗಳಾವುವು ? ಎಂದು ತಿಳಿಯುವುದು ಅಗತ್ಯ.
  • ವಿಭವಾಂತರದ ಜೊತೆ ವಿದ್ಯುತ್ಪ್ರವಾಹದ ಅಳತೆಗಳನ್ನು ಗ್ರಾಫ್ ಸಹಾಯದಿಂದ ಬಿಡಿಸಿ ರೋಧದ ಅಳತೆಯನ್ನು  ಸೆಂಟಿಮೀಟರ್ ಳಲ್ಲಿ ಕಂಡುಹಿಡಿಯುವುದು.
  • ಮಿಶ್ರಣದ ಘಟಕಗಳನ್ನು ಕೆಳಕಂಡ ವಿಧಾನಗಳಿಂದ ಬೇರ್ಪಡಿಸಬಹುದು.
    • ಬೇರ್ಪಡಿಸುವ ಆಲಿಕೆ
    • ವರ್ಣ ರೇಖನ
    • ಕೇಂದ್ರ ತ್ಯಾಗಿ ಶೋಷಕ ಪ್ರಕ್ರಿಯೆ
    •  ಸರಳ ಭಟ್ಟಿ ಇಳಿಸುವಿಕೆ
    • ಆಂಶಿಕ ಭಟ್ಟಿ ಇಳಿಸುವಿಕೆ

Go to Top